ಏಕನಾಥ್ ಶಿಂಧೆ ಸರ್ಕಾರ ಮತದಾರರಿಗೆ ಲಂಚ ನೀಡುತ್ತಿದೆ: ಉದ್ಧವ್ ಠಾಕ್ರೆ ಗಂಭೀರ ಆರೋಪ - Mahanayaka

ಏಕನಾಥ್ ಶಿಂಧೆ ಸರ್ಕಾರ ಮತದಾರರಿಗೆ ಲಂಚ ನೀಡುತ್ತಿದೆ: ಉದ್ಧವ್ ಠಾಕ್ರೆ ಗಂಭೀರ ಆರೋಪ

11/08/2024


Provided by

ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ಮತದಾರರಿಗೆ “ಲಂಚ” ನೀಡುತ್ತಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ. ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮುಖ್ಯಮಂತ್ರಿ ಲಡ್ಕಿ ಬಹಿನ್ ಯೋಜನೆಯನ್ನು ಪ್ರಾರಂಭಿಸಿದ್ದಕ್ಕಾಗಿ ಆಡಳಿತ ಸರ್ಕಾರವನ್ನು ಟೀಕಿಸಿದ ಠಾಕ್ರೆ, ಇದು ಮತದಾರರನ್ನು ಸೆಳೆಯುವ ತಂತ್ರ ಎಂದು ಕರೆದರು.

ಥಾಣೆಯಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಈ ಯೋಜನೆಯಿಂದ ಪ್ರಯೋಜನ ಪಡೆಯುವಂತೆ ಮಹಿಳೆಯರನ್ನು ಒತ್ತಾಯಿಸಿದರು. ಇದು ಅವರ ಹಕ್ಕಿನ ಹಣ ಎಂದು ಹೇಳಿದರು. ಆದರೆ ಅವರ ಆತ್ಮಗೌರವದಲ್ಲಿ ರಾಜಿ ಮಾಡಿಕೊಳ್ಳಬೇಡಿ ಎಂದು ಒತ್ತಾಯಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ ಠಾಕ್ರೆ, ಎಲ್ಲಾ ಪ್ರಮುಖ ಯೋಜನೆಗಳನ್ನು ಗುಜರಾತ್ ಗೆ ಕೊಟ್ಟಿದ್ದರೂ ಮಹಾರಾಷ್ಟ್ರದಲ್ಲಿ ಏನೂ ಉಳಿದಿಲ್ಲ ಎಂದು ಹೇಳಿದ್ದಾರೆ.

ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಛತ್ರಪತಿ ಶಿವಾಜಿ ಮಹಾರಾಜರಿಗೆ ಐತಿಹಾಸಿಕವಾಗಿ ಸಂಬಂಧಿಸಿದ ಆಯುಧವಾದ “ವಾಘ್-ನಖ್” (ಹುಲಿ ಉಗುರುಗಳು) ಗೆ ಹೋಲಿಸಿದರು, ಅವರು ಯಾವುದೇ ಸವಾಲುಗಳಿಗೆ ಹೆದರುವುದಿಲ್ಲ ಎಂದು ಹೇಳಿದರು.

ರಾಜ್ ಠಾಕ್ರೆ ಅವರ ಪಕ್ಷದ ಕಾರ್ಯಕರ್ತರು ಉದ್ದವ್ ಅವರ ವಾಹನದ ಮೇಲೆ ದಾಳಿ ನಡೆಸಿದ್ದರು. ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಉದ್ಧವ್ ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿ, ಬಳೆಗಳು, ಟೊಮೆಟೊಗಳು ಮತ್ತು ತೆಂಗಿನಕಾಯಿಗಳನ್ನು ಎಸೆದು ವಾಹನಗಳಿಗೆ ಹಾನಿಯನ್ನುಂಟು ಮಾಡಿದಾಗ ಥಾಣೆಯಲ್ಲಿ ಶನಿವಾರ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಉದ್ಧವ್ ಠಾಕ್ರೆ ಅವರು ಶಿವಸೇನೆ (ಯುಬಿಟಿ) ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಬೇಕಿದ್ದ ಗಡ್ಕರಿ ರಂಗಾಯತನ್ ಬಳಿ ಈ ವಾಗ್ವಾದ ನಡೆದಿದೆ. ಠಾಕ್ರೆ ಆಗಮಿಸುತ್ತಿದ್ದಂತೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಿರುದ್ಧ ಪ್ರತಿಭಟಿಸಿ ಎಂಎನ್ಎಸ್ ಕಾರ್ಯಕರ್ತರು ಸಭಾಂಗಣಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು. ಪೊಲೀಸರು ಮಧ್ಯಪ್ರವೇಶಿಸಿ, ಸುವ್ಯವಸ್ಥೆಯನ್ನು ಪುನಃಸ್ಥಾಪಿಸಿದರು ಮತ್ತು ಹಲವಾರು ಎಂಎನ್ಎಸ್ ಪ್ರತಿಭಟನಾಕಾರರನ್ನು ಬಂಧಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ