ಹೆಬ್ರಿ: ಕೂಡ್ಲು ಫಾಲ್ಸ್‌ನ ಬಂಡೆಯಿಂದ ಬಿದ್ದು ಉಡುಪಿ ಮೂಲದ ಯುವಕ ಸಾವು - Mahanayaka
3:31 AM Thursday 18 - December 2025

ಹೆಬ್ರಿ: ಕೂಡ್ಲು ಫಾಲ್ಸ್‌ನ ಬಂಡೆಯಿಂದ ಬಿದ್ದು ಉಡುಪಿ ಮೂಲದ ಯುವಕ ಸಾವು

kudlu falls
18/12/2025

ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ(Hebri )ಸಮೀಪದ ಪ್ರಸಿದ್ಧ ಪ್ರವಾಸಿ ತಾಣವಾದ ಕೂಡ್ಲು ಜಲಪಾತ(Kudlu Falls )ದಲ್ಲಿ ಆಕಸ್ಮಿಕವಾಗಿ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಉಡುಪಿಯ ಕೊಂಜಾಡಿ ಮೂಲದ, ಪ್ರಸ್ತುತ ಬೆಂಗಳೂರು ನಿವಾಸಿಯಾದ ಸವಿತಾ ಪಿ. ಶೆಟ್ಟಿ ಅವರ ಪುತ್ರ ಮನ್ವಿತ್ (25) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿದ್ದ ಮನ್ವಿತ್ ಅವರು ಡಿಸೆಂಬರ್ 12ರಂದು ತಮ್ಮ ಸ್ವಂತ ಊರಾದ ಕೊಂಜಾಡಿಗೆ ಬಂದಿದ್ದರು. ಡಿಸೆಂಬರ್ 14ರಂದು ಸ್ನೇಹಿತರೊಂದಿಗೆ ವಿಹಾರಕ್ಕಾಗಿ ಹೆಬ್ರಿಯ ಕೂಡ್ಲು ಫಾಲ್ಸ್‌ಗೆ ತೆರಳಿದ್ದರು.

ಜಲಪಾತದ ಬಳಿ ಸ್ನೇಹಿತರೆಲ್ಲರೂ ನೀರಿಗಿಳಿದು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ, ಮನ್ವಿತ್ ಅವರು ಎತ್ತರದ ಬಂಡೆಯೊಂದರ ಮೇಲೆ ಕುಳಿತುಕೊಂಡಿದ್ದರು. ಈ ವೇಳೆ ಅವರಿಗೆ ಆಕಸ್ಮಿಕವಾಗಿ ತಲೆಸುತ್ತು (ಮೂರ್ಛೆ) ಬಂದಂತಾಗಿ ಕೆಳಗೆ ನೀರಿಗೆ ಬಿದ್ದರೆನ್ನಲಾಗಿದೆ. ಬಂಡೆಯಿಂದ ಬಿದ್ದ ಪರಿಣಾಮ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಕೂಡಲೇ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆ(Manipal Hospital)ಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಡಿಸೆಂಬರ್ 17ರ ಬುಧವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಮನ್ವಿತ್ ಅವರು ಮೊದಲಿನಿಂದಲೂ ಮೂರ್ಛೆ ರೋಗದ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ