ಪ್ರೇಮ ಸಂಬಂಧಕ್ಕೆ ಕುಟುಂಬದಿಂದ ವಿರೋಧ: ಕುಂಕುಮ ಹಚ್ಚಿ, ಸಿಹಿತಿಂಡಿ ತಿಂದು ಆತ್ಮಹತ್ಯೆ ಮಾಡಿಕೊಂಡ ನವಜೋಡಿ

ತಮ್ಮ ಪ್ರೇಮ ಸಂಬಂಧಕ್ಕೆ ಕುಟುಂಬದಿಂದ ವಿರೋಧವನ್ನು ಎದುರಿಸುತ್ತಿದ್ದ ನವಜೋಡಿಯು ಮದುವೆಯ ಆಚರಣೆಯನ್ನು ನೆರವೇರಿಸಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಘಟನೆಯು ಉತ್ತರ ಪ್ರದೇಶದ ಬುದ್ಧನಗರದಲ್ಲಿ ನಡೆದಿದ್ದು ಮೃತರನ್ನು ರಾಖಿ ಚೌಹಾಣ್ (21) ಮತ್ತು ಉತ್ತರಾಖಂಡದ ಹರಿದ್ವಾರದ ಮನೀಶ್ ಚೌಹಾಣ್ (24) ಎಂದು ಗುರುತಿಸಲಾಗಿದೆ. ಇವರ ಶವಗಳು ಬಹ್ಸುಮಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಪ್ರಾಥಮಿಕ ತನಿಖೆಯ ಪ್ರಕಾರ, ರಾಖಿ ಮತ್ತು ಮನೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಅವರ ಕುಟುಂಬಗಳಿಂದ ವಿರೋಧವನ್ನು ಎದುರಿಸಬೇಕಾಯಿತು ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಸಂತೋಷ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಜೋಡಿಗಳು ಭೇಟಿಯಾದರು. ನಂತರ ಮನೀಶ್, ರಾಖಿಯ ಹಣೆಗೆ ಕುಂಕುಮವನ್ನು ಹಚ್ಚಿದರು. ನಂತರ, ಅವನು ಅವಳಿಗೆ ಸಿಹಿತಿಂಡಿಗಳನ್ನು ತಿನ್ನಿಸಿದನು ಮತ್ತು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡರು.
ದಂಪತಿಗಳು ಒಂದೇ ಹಗ್ಗದಿಂದ ಎರಡು ಲೂಪ್ ಗಳನ್ನು ರಚಿಸಿದರು ಮತ್ತು ಪರಸ್ಪರರ ಕೈಗಳನ್ನು ಹಿಡಿದುಕೊಂಡು ಮರಕ್ಕೆ ನೇಣು ಬಿಗಿದುಕೊಂಡರು ಎಂದು ಕುಮಾರ್ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಕುಂಕುಮ ಮತ್ತು ಸಿಹಿ ಪೆಟ್ಟಿಗೆಗಳು ಕಂಡುಬಂದಿವೆ.