ಸಿದ್ದರಾಮೋತ್ಸವ ಮುಗಿಸಿ ಊರಿಗೆ ತೆರಳುತ್ತಿದ್ದ ಅಭಿಮಾನಿ ಅಪಘಾತಕ್ಕೆ ಬಲಿ - Mahanayaka
6:45 PM Thursday 16 - October 2025

ಸಿದ್ದರಾಮೋತ್ಸವ ಮುಗಿಸಿ ಊರಿಗೆ ತೆರಳುತ್ತಿದ್ದ ಅಭಿಮಾನಿ ಅಪಘಾತಕ್ಕೆ ಬಲಿ

siddaramothsava
04/08/2022

ಬೆಂಗಳೂರು: ಸಿದ್ದರಾಮೋತ್ಸವ ಮುಗಿಸಿ ಊರಿಗೆ ಮರಳುತ್ತಿದ್ದ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಬಳಿ ನಡೆದಿದೆ.


Provided by

ಫಸಿ ಎಂಬವರು ಮೃತಪಟ್ಟವರಾಗಿದ್ದು,  ಇವರು ಸಿದ್ದರಾಮೋತ್ಸವ ಮುಗಿಸಿದ ಬಳಿಕ ತಮ್ಮ ಟಾಟಾ ಏಸ್ ವಾಹನದಲ್ಲಿ ಊರಿಗೆ ಹೊರಟಿದ್ದರು. ಊರು ಸಮೀಪವಿರುವಾಗಲೇ ವಾಹನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ.

ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ