ಮದರಸಗಳಲ್ಲಿ ಉಗ್ರರನ್ನು ಬೆಳೆಸಲಾಗುತ್ತಿದೆ | ಸಚಿವೆಯಿಂದ ವಿವಾದಾತ್ಮಕ ಹೇಳಿಕೆ
ಭೋಪಾಲ್: ಎಲ್ಲ ಉಗ್ರರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮದರಸದಲ್ಲಿ ರಾಷ್ಟ್ರೀಯತೆ ಕಲಿಸುವುದಿಲ್ಲ ಎಂದು ಹೇಳಿದ್ದಾರೆ.
ಎಲ್ಲ ಭಯೋತ್ಪಾದಕರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ. ಜಮ್ಮು-ಕಾಶ್ಮೀರವನ್ನು ಅವರು ಭಯೋತ್ಪಾದಕರ ಕಾರ್ಖಾನೆ ಮಾಡಿದ್ದಾರೆ. ಸಮಾಜದ ಪ್ರಗತಿಗಾಗಿ ಮದರಸಗಳನ್ನು ದೇಶದ ಶಿಕ್ಷಣ ಸಂಸ್ಥೆಗಳೊಳಗೆ ವಿಲೀನ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಅಸ್ಸಾಂ ಸರ್ಕಾರವು ಮದರಸಗಳನ್ನು ಮುಚ್ಚುವ ಬಗ್ಗೆ ಪ್ರಕಟಣೆ ಹೊರಡಿಸಿತ್ತು. ಇದನ್ನು ಬೆಂಬಲಿಸಿ ಮಾತನಾಡಿರುವ ಉಷಾ ಠಾಕೂರ್, ಮದರಸಗಳ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಅಸ್ಸಾಂ ಸರ್ಕಾರವು ಸರ್ಕಾರಿ ಮದರಸ ಹಾಗೂ ಸಂಸ್ಕೃತ ಶಾಲೆಗಳನ್ನೂ ಮುಚ್ಚಲು ಪ್ರಕಟಣೆ ಹೊರಡಿಸಿತ್ತು. ಸರ್ಕಾರವು ಸಾರ್ವಜನಿಕ ಹಣದಿಂದ ಧಾರ್ಮಿಕ ಶಿಕ್ಷಣ ನೀಡುವುದಿಲ್ಲ ಎಂದು ಅದು ಹೇಳಿತ್ತು. ಆದರೆ ಉಷಾ ಠಾಕೂರ್ ಮದರಸಗಳ ಬಗ್ಗೆ ಮಾತ್ರವೇ ಮಾತನಾಡಿದ್ದಾರೆ. ಅಲ್ಲದೇ, ಆಧಾರ ರಹಿತ ಮಾತುಗಳನ್ನಾಡಿದ್ದಾರೆ ಎಂಬ ಆಕ್ರೋಶಗಳು ಸದ್ಯ ಕೇಳಿ ಬಂದಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.