ಎನ್ ಕೌಂಟರ್: ಗುರುದ್ವಾರ ಮುಖ್ಯಸ್ಥನನ್ನು ಗುಂಡಿಕ್ಕಿ‌ಕೊಂಡ ಆರೋಪಿ ಎನ್ ಕೌಂಟರ್ ನಲ್ಲಿ ಸಾವು - Mahanayaka
4:34 PM Friday 11 - September 2026

ಎನ್ ಕೌಂಟರ್: ಗುರುದ್ವಾರ ಮುಖ್ಯಸ್ಥನನ್ನು ಗುಂಡಿಕ್ಕಿ‌ಕೊಂಡ ಆರೋಪಿ ಎನ್ ಕೌಂಟರ್ ನಲ್ಲಿ ಸಾವು

09/04/2024

ಉತ್ತರಾಖಂಡದ ಉಧಮ್ ಸಿಂಗ್ ನಗರದ ನಾನಕ್‌ಮಟ್ಟಾ ಸಾಹಿಬ್ ಗುರುದ್ವಾರದ ಡೇರಾ ಕರಸೇವಾ ಮುಖ್ಯಸ್ಥನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯನ್ನು ಉತ್ತರಾಖಂಡ ಎಸ್ ಟಿಎಫ್ ಮತ್ತು ಹರಿದ್ವಾರ ಪೊಲೀಸರು ಎನ್ ಕೌಂಟರ್ ನಲ್ಲಿ ಕೊಂದಿದ್ದಾರೆ ಎಂದು ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಬಾಬಾ ತರ್ಸೆಮ್ ಸಿಂಗ್ ಅವರನ್ನು ಮಾರ್ಚ್ 28 ರಂದು ಬೈಕ್‌ನಲ್ಲಿ ಬಂದ ಸರಬ್ಜಿತ್ ಸಿಂಗ್ ಮತ್ತು ಅಮರ್ ಜಿತ್ ಸಿಂಗ್ ಅವರು ದೇವಾಲಯದ ಆವರಣದಲ್ಲಿ ಗುಂಡಿಕ್ಕಿ ಕೊಂದಿದ್ದರು. ನಾನಕ್‌ಮಟ್ಟಾ ಸಾಹಿಬ್ ಗುರುದ್ವಾರದ ಡೇರಾ ಕರಸೇವಾ ಮುಖ್ಯಸ್ಥರು ಕುರ್ಚಿಯಲ್ಲಿ ಕುಳಿತಿದ್ದಾಗ ಹಿಂಬದಿ ಸವಾರಿ ಮಾಡುತ್ತಿದ್ದ ಶೂಟರ್ ರೈಫಲ್ ನಿಂದ ಗುಂಡು ಹಾರಿಸಿದ್ದ.

ಅಮರ್ ಜಿತ್ ಸಿಂಗ್ ಅವರ ಸಾವನ್ನು ಘೋಷಿಸುವಾಗ, ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ಎಎನ್ಐಗೆ ಅವರ ಸಹಚರ ಪರಾರಿಯಾಗಿದ್ದಾನೆ ಮತ್ತು ಅಧಿಕಾರಿಗಳು ಅವನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದ್ದಾರೆ.
ಉತ್ತರಾಖಂಡ ಪೊಲೀಸರು ಬಾಬಾ ಹತ್ಯೆಯನ್ನು ಸವಾಲಾಗಿ ತೆಗೆದುಕೊಂಡಿದ್ದರು ಮತ್ತು ಎಸ್ ಟಿಎಫ್ ಮತ್ತು ಪೊಲೀಸರು ಇಬ್ಬರೂ ಕೊಲೆಗಾರರನ್ನು ನಿರಂತರವಾಗಿ ಹುಡುಕುತ್ತಿದ್ದರು.

ಹರಿದ್ವಾರದ ಕಲಿಯಾರ್ ರಸ್ತೆ ಮತ್ತು ಭಗವಾನ್ಪುರ ನಡುವೆ ಎನ್ ಕೌಂಟರ್ ನಡೆದಿದೆ ಎಂದು ಹರಿದ್ವಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪರ್ಮಿಂದರ್ ದೋವಲ್ ತಿಳಿಸಿದ್ದಾರೆ. ಅಮರ್ ಜಿತ್ ಸಿಂಗ್ ವಿರುದ್ಧ 16 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಅವರು ಹೇಳಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti