ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: 25 ಸಾವಿರ ರೂ.ವರೆಗೆ ಪ್ರೋತ್ಸಾಹ ಧನ
ಹಾಸನ: 2020-21ನೇ ಸಾಲಿನಲ್ಲಿ National Council for Teacher Education , Department of State Educational Research and Training ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಮತ್ತು ಡಿ.ಎಡ್ ಕೋರ್ಸ್ಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ) ಸಮುದಾಯದ ಅರ್ಹ ವಿದ್ಯಾರ್ಥಿಗಳಿಗೆ ರೂ 25,000/-ಗಳ ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಲಾಗಿದ್ದು.
ಅಭ್ಯರ್ಥಿಗಳು ಅರ್ಜಿಯನ್ನು ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in ಅಥವಾ ಜಿಲ್ಲಾ ಕಚೇರಿಯಿಂದ ಪಡೆದು ಭರ್ತಿಮಾಡಿ ಅರ್ಜಿಯಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಡಿಸೆಂಬರ್ 15ರೊಳಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾóದ್ ಭವನ್, ಆಕಾಶವಾಣಿ ಹಿಂಭಾಗ, ಹಾಸನ. ಅರ್ಜಿ ಸಲ್ಲಿಸಬಹುದಾಗಿದೆ.
ಷರತ್ತುಗಳು:-ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಭ್ಯರ್ಥಿಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಬೌದ್ಧ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯವು ಗರಿಷ್ಠ ರೂ 6 ಲಕ್ಷಕ್ಕೆ ಮೀರಿರಬಾರದು, ವಿದ್ಯಾರ್ಥಿಯು ರಾಜ್ಯ/ಕೇಂದ್ರ ಸರ್ಕಾರಿ ಉದ್ಯೋಗಿ ಅಥವಾ ಪೂರ್ಣಕಾಲಿಕ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ/ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನಾ ಆಜಾದ್ ಭವನ, ಶ್ರೀ ವಿದ್ಯಾಗಣಪತಿ ದೇವಸ್ಥಾನದ ಅಡ್ಡ ರಸ್ತೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸಸ. ದೂರವಾಣಿ ಸಂಖ್ಯೆ: 08172-267373, 08172-268373 ಸಂಪರ್ಕಿಸಬಹುದಾಗಿ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.