ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು 12ಕ್ಕೂ ಅಧಿಕ ಜನರಿಗೆ ಗಾಯ - Mahanayaka
11:26 PM Wednesday 22 - April 2026

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: 5 ಮಂದಿ ಸಾವು 12ಕ್ಕೂ ಅಧಿಕ ಜನರಿಗೆ ಗಾಯ

manipur
29/05/2023

ಮಣಿಪುರದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಸಹಿತ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಚುನಾವಣಾ ಚಾಣಕ್ಯ ಎಂದು ಕರೆಸಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರೂ, ಹಿಂಸಾಚಾರ ನಿಲ್ಲುತ್ತಿಲ್ಲ. ಭಾನುವಾರ ಅಮಿತ್ ಶಾ ಅವರು . ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡುವುದಕ್ಕೂ ಕೆಲವೇ ಗಂಟೆಗಳ ಮೊದಲು ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ.

ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಾಂತ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶನಿವಾರ ಮಣಿಪುರಕ್ಕೆ ತೆರಳಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.

ರಾಜ್ಯದಲ್ಲಿ ಮೈತಿ ಸಮುದಾಯ ಮತ್ತು ಗುಡ್ಡಗಾಡು ಬುಡಕಟ್ಟುಗಳ ನಡುವಿನ ಹಳೆಯ ಜನಾಂಗೀಯ ದ್ವೇಷವನ್ನು ಮತ್ತೆ ಕೆಣಕಿದಂತಾಗಿದೆ. ಹೆಚ್ಚಿನ ರಕ್ಷಣೆಗಾಗಿ ತಮ್ಮನ್ನು ಎಸ್ ​ಟಿ ಪಟ್ಟಿಗೆ ಸೇರಿಸಬೇಕೆಂದು ಮೈತಿಗಳು ಬಹುಕಾಲದಿಂದ ಬೇಡಿಕೆಯಿಟ್ಟಿದ್ದರೆ, ರಾಜ್ಯದ ಬುಡಕಟ್ಟು ಜನಾಂಗದವರು, ವಿಶೇಷವಾಗಿ ನಾಗಾಗಳು ಮತ್ತು ಕುಕಿಗಳು – ಇದನ್ನು ಬಲವಾಗಿ ವಿರೋಧಿಸಿದ್ದಾರೆ. ಮೈತಿಗಳನ್ನು ಎಸ್ ​ಟಿ ಪಟ್ಟಿಗೆ ಸೇರಿಸಿದರೆ ಇದು ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತದೆ ಎಂದು ಬುಡಕಟ್ಟು ಜನಾಂಗದವರು ಹೇಳುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ