ಸಂಧ್ಯಾ ಪೈ ಅವರಿಗೆ “ವಿಶ್ವಪ್ರಭಾ ಪುರಸ್ಕಾರ”
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಶೆಣೈ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2023 ‘ನ್ನು ತರಂಗದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಸಾಹಿತಿ ಸಂಧ್ಯಾ ಪೈ ಅವರಿಗೆ ನೀಡಲಾಗುವುದು .
ಜನವರಿ ತಿಂಗಳಲ್ಲಿ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿಸಂಧ್ಯಾ ಪೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು .
ಈ ಪ್ರಯುಕ್ತ ಕಾರ್ಕಳ ಯಕ್ಷ ರಂಗಾಯಣದ ಕಲಾವಿದರಿಂದ ಶಶಿರಾಜ್ ರಾವ್ ಕಾವೂರ್ ರಚಿಸಿದ ಡಾII ಜೀವನ್ ರಾಮ್ ಸುಳ್ಯ ನಿರ್ದೇಶನದ ‘ಪರಶುರಾಮ ‘ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ತಿಳಿಸಿದ್ದಾರೆಪ್ರಶಸ್ತಿಯು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿದೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka




























