ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ: ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಪಾರು - Mahanayaka

ಧಾರಾಕಾರ ಮಳೆಗೆ ಕುಸಿದು ಬಿದ್ದ ಮನೆಯ ಗೋಡೆ: ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಪಾರು

bajpe
05/08/2024

ಬಜ್ಪೆ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು, ಮನೆಯಲ್ಲಿದ್ದವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಘಟನೆ  ಬಜ್ಪೆ(Bajpe)ಯ ಕರಂಬಾರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಯಂತಿ w/0 ದಿವಂಗತ ಕರಿಯ ಇವರ ಮನೆಯ ಗೋಡೆಯ ಒಂದು ಭಾಗ ಕುಸಿದು ಬಿದ್ದಿದ್ದು, ಮನೆಯ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಗೋಡೆ ಕುಸಿದ ಪರಿಣಾಮ ಮನೆಯಲ್ಲಿ ವಾಸ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಮನೆಯಲ್ಲಿ ಮಕ್ಕಳು ಮಹಿಳೆಯರು ಇದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿತ್ತು. ಮನೆಯಲ್ಲಿದ್ವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಆದರೆ ಮನೆಯ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟು ನಿಂತಿದೆ. ಈ ಮನೆಯಲ್ಲಿ ಹೇಗೆ ವಾಸ ಮಾಡಬೇಕು ಎನ್ನುವುದು ತಿಳಿಯದೇ ಕಂಗಾಲಾಗಿದ್ದಾರೆ. ಮನೆಯ ಗೋಡೆ ಯಾವುದೇ ಕ್ಷಣದಲ್ಲೂ ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ.


Provided by

ಘಟನಾ ಸ್ಥಳಕ್ಕೆ ಪಂಚಾಯತ್ ಅಧಿಕಾರಿ ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸದ್ಯ ಮನೆಯಲ್ಲಿದ್ದವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ದ.ಸಂ.ಸ. ತಾಲೂಕು ಸಂಘಟನಾ ಸಂಚಾಲಕ ರುಕ್ಕಯ್ಯ ಅಮೀನ್ ಅವರ ಮನೆಗೆ ಸ್ಥಳಾಂತರಿಸಲಾಗಿದೆ.

bajpe

ತೀವ್ರ ಮಳೆಯಿಂದಾಗಿ ಪ್ರಕೃತಿ ವಿಕೋಪ(Natural disaster)ದ ಕಾರಣಕ್ಕೆ ಮನೆ ಕಳೆದುಕೊಂಡಿರುವ ಈ ಕುಟುಂಬಕ್ಕೆ  ಹೊಸ ಮನೆಯ ಅವಶ್ಯಕತೆ ಇದ್ದು, ಸಂಬಂಧಪಟ್ಟ ಇಲಾಖೆ ಇತ್ತ ಗಮನ ಹರಿಸಿ ಮನೆ ನಿರ್ಮಾಣ ಮಾಡಿಕೊಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಸಂದರ್ಭದಲ್ಲಿ  ದಲಿತ ಸಂಘರ್ಷ ಸಮಿತಿ(Dalit Sangharsh Samiti) (ರಿ.) ಪ್ರೊ.ಬಿ.ಕೃಷ್ಣಪ್ಪ(Prof. B. Krishnappa) ದ.ಕ.ಜಿಲ್ಲೆ ಇದರ ಜಿಲ್ಲಾ ಸಂಚಾಲಕ ರಘು ಕೆ. ಎಕ್ಕಾರು, ಜಿಲ್ಲಾ ಪದಾಧಿಕಾರಿಗಳಾದ ಸದಾಶಿವ ಪಡುಬಿದ್ರಿ, ಸರೋಜಿನಿ ಬಂಟ್ವಾಳ, ಕಮಲಾಕ್ಷ ಬಜಾಲ್, ರಾಮ್ ದಾಸ್ ಮೇರೆಮಜಲ್, ಮಂಗಳೂರು ತಾಲೂಕು ಸಂಚಾಲಕ ರಾಘವೇಂದ್ರ ಪೇಜಾವರ , ತಾಲೂಕು ಪದಾಧಿಕಾರಿಗಳಾದ ರುಕ್ಕಯ್ಯ ಅಮೀನ್ , ಕೃಷ್ಣ ಎಕ್ಕಾರು,  ಸೀತಾ ಪೇಜಾವರ,  ಕರಂಬಾರು ಗ್ರಾಮ ಪದಾಧಿಕಾರಿ ನಿಯೋಗ  ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿಸುವ ಕಾರ್ಯ ಮಾಡಲಾಯಿತು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ