ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತರಲು ನಾವು ಬಿಡಲ್ಲ: ಜಾರ್ಖಂಡ್ ಸಿಎಂ ಖಡಕ್ ಹೇಳಿಕೆ

ನಮ್ಮ ಸರ್ಕಾರ ಉಳಿಯಲಿ ಅಥವಾ ಹೋಗಲಿ, ಯಾವುದೇ ಸಂದರ್ಭದಲ್ಲೂ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಜಾರಿಗೆ ತರಲು ನಾವು ಬಿಡುವುದಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ. ಇದರ ವಿರುದ್ಧ ನಾವು ಹೋರಾಡುತ್ತೇವೆ ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಜಾರ್ಖಂಡ್ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿಂದು ಕೇಂದ್ರ ಸರ್ಕಾರದ ಉದ್ದೇಶಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಸೇರಿದಂತೆ ಹಲವು ವಿಚಾರಗಳ ಕುರಿತು ಸದನದ ನಾಯಕರಾಗಿ ಮಾತನಾಡಿದ ಸೊರೇನ್, ಕ್ಷೇತ್ರ ಪುನರ್ ವಿಂಗಡಣೆಯ ಹಿಂದೆ ಒಂದು ಗುಪ್ತ ಕಾರ್ಯಸೂಚಿ ಇರುವ ಮಾಹಿತಿ ಇದೆ. ಬುಡಕಟ್ಟು ಮತ್ತು ದಲಿತರ ಸೀಟುಗಳನ್ನು ಕಡಿತಗೊಳಿಸುವ ಉದ್ದೇಶ ಎದ್ದು ಕಾಣುತ್ತಿದೆ. ಇದೇ ರೀತಿಯ ಪ್ರಯತ್ನ ಈ ಹಿಂದೆಯೂ ಮಾಡಲಾಗಿತ್ತು. ಇದನ್ನು ಗೌರವಾನ್ವಿತ ದಿಶೋಮ್ ಗುರು ಶಿಬು ಸೊರೇನ್ ರ ನೇತೃತ್ವದಲ್ಲಿ ಅಷ್ಟಕ್ಕೆ ತಡೆಹಿಡಿಯಲಾತಿಯಿತು. ಆದರೆ, ಈ ಬಾರಿ ಕ್ಷೇತ್ರ ಪುನರ್ ವಿಂಗಡಣೆಯ ಪಿತೂರಿಯನ್ನು ದೇಶಾದ್ಯಂತ ಬಹಳ ಚಾಣಾಕ್ಷತನದಿಂದ ರೂಪಿಸಲಾಗುತ್ತಿದೆ. ನಾವು ಇದರ ಮೇಲೂ ಕಣ್ಣಿಟ್ಟಿದ್ದೇವೆ. ಎಂತಹ ಪರಿಸ್ಥಿತಿ ಬಂದರೂ ಬಲವಾಗಿ ಖಂಡಿಸುತ್ತೇವೆ. ನಮ್ಮ ಸರ್ಕಾರ ಉಳಿಯಲಿ ಅಥವಾ ಹೋಗಲಿ, ನಾವು ಸರ್ಕಾರದಲ್ಲಿದ್ದರೂ ಅಥವಾ ಇಲ್ಲದಿದ್ದರೂ, ಇದರ ವಿರುದ್ಧ ನಾವು ಹೋರಾಡುತ್ತೇವೆ ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬಹಿರಂಗ ಸವಾಲು ಹಾಕಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj