ಭಾರತೀಯರೇನು ಹಂದಿಗಳೇ ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ - Mahanayaka

ಭಾರತೀಯರೇನು ಹಂದಿಗಳೇ ? ಎಂದು ಪ್ರಶ್ನಿಸಿದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

03/01/2021

ದೆಹಲಿ: ಆಸ್ಟ್ರಾಜೆನಿಕಾ ಲಸಿಕೆಯನ್ನು ಕೊರೊನಾ ವಿರುದ್ಧ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  WHO ಅನುಮತಿ ನೀಡದೇ ಇರುವ  ಲಸಿಕೆಯನ್ನು ಬಳಸಲು ಅಥವಾ ಪ್ರಯೋಗಿಸಲು  ಭಾರತೀಯರೇನು ಹಂದಿಗಳೇ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.  ಕೇಂದ್ರ ಸರ್ಕಾರವು  WHO ಅನುಮತಿ ನೀಡದ ಲಸಿಕೆಯನ್ನು ಭಾರತೀಯರ ಮೇಲೆ ಪ್ರಯೋಗಿಸಲು ಮುಂದಾಗಿದೆ. ಈ ರೀತಿಯಾಗಿ ಭಾರತೀಯರ ಮೇಲೆ ಲಸಿಕೆ ಪ್ರಯೋಗಿಸಲು ಅವರೇನು ಹಂದಿಗಳೇ ಎಂದು ಮಾರ್ಮಿಕವಾಗಿ ಕೇಂದ್ರ ಸರ್ಕಾರವನ್ನು ಅವರು ಪ್ರಶ್ನಿಸಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ಅವರು, ಆಡಳಿತ ಪಕ್ಷದಲ್ಲಿದ್ದರೂ  ಕೆಲವು ವಿಚಾರದಲ್ಲಿ ಬಿಜೆಪಿಯ  ವಿಚಾರಗಳಲ್ಲಿ ಅವರು ರಾಜಿ ಮಾಡಿಕೊಳ್ಳುವುದಿಲ್ಲ. ಈ ಹಿಂದೆಯೂ ಸ್ವಪಕ್ಷೀಯರ ವಿರುದ್ಧವೇ ಅವರು ಹೇಳಿಕೆ ನೀಡಿದ್ದರು. ಇದೀಗ ಕೊವಿಡ್ ಲಸಿಕೆಯ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ.

 

ಇತ್ತೀಚಿನ ಸುದ್ದಿ