ಕಾಡು ಹಂದಿಯ ದಾಳಿ: ರೈತನ ಕೈ ಬೆರಳು ತುಂಡು, ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ - Mahanayaka

ಕಾಡು ಹಂದಿಯ ದಾಳಿ: ರೈತನ ಕೈ ಬೆರಳು ತುಂಡು, ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯ

chikkamagaluru
15/07/2025

Mahanayaka– ಮೂಡಿಗೆರೆ: ತಾಲೂಕು, ಅಲೆಕಾನ್ ಗ್ರಾಮದಲ್ಲಿ — ದನ ಮೇಯಿಸಲು ಹೋದಾಗ ಕಾಡು ಹಂದಿಯ ದಾಳಿಗೆ ಅಲೆಕಾನ್ ಗ್ರಾಮದ ರೈತ ಉಪೇಂದ್ರ, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ದನಗಳನ್ನು ಮೇಯಿಸಿ ಹಿಂತಿರುಗುತ್ತಿದ್ದ ವೇಳೆ ಏಕಾಏಕಿ ಬಂದ ಕಾಡು ಹಂದಿ ಕೈ ಮೇಲೆ ದಾಳಿ ನಡೆಸಿದ್ದು, ಅವರ ಕೈಯ ಒಂದು ಬೆರಳನ್ನು ತೀವ್ರವಾಗಿ ಕಚ್ಚಿದ್ದು, ಬೆರಳು ಸಂಪೂರ್ಣವಾಗಿ ತುಂಡಾಗಿದೆ.

ಗಾಯಗೊಂಡ ರೈತ ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿ ಚಿಕಿತ್ಸೆ ಪಡೆದಿದ್ದಾರೆ. ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದರೂ, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಾರದಿರುವುದಾಗಿ ಅವರು ಆರೋಪಿಸಿದ್ದಾರೆ.

“ನಾನು ಬಡ ರೈತನು. ಹೀಗೆ ಬೆರಳು ಕಟ್ ಆದ ಮೇಲೆ ಕೆಲಸ ಮಾಡುವ ಸಾಮರ್ಥ್ಯವೂ ಕಡಿಮೆಯಾಗಿದೆ. ನನ್ನ ಕುಟುಂಬ ನಿರೀಕ್ಷೆಯಲ್ಲಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ನನ್ನನ್ನು ನಂಬಿಕೆ ಇಟ್ಟು ಕಾಪಾಡಬೇಕು, ಪರಿಹಾರ ಒದಗಿಸಬೇಕು,” ಎಂದು ಅಲೆಕಾನ್ ಉಪೇಂದ್ರ ಮನವಿಮಾಡಿದ್ದಾರೆ.

ಗ್ರಾಮಸ್ಥರು ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಮೃಗದ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕು, ಗ್ರಾಮಗಳಲ್ಲಿ ಗಸ್ತು ಬಲವರ್ಧನೆ ಮಾಡಬೇಕು ಎಂಬ ಆಗ್ರಹ ವ್ಯಕ್ತಪಡಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ