60 ಕ್ವಿಂಟಾಲ್ ಭತ್ತವನ್ನು ತಿಂದು ತೇಗಿದ ಕಾಡಾನೆಗಳು: ರೈತರು ಕಂಗಾಲು - Mahanayaka
12:34 PM Saturday 25 - January 2025

60 ಕ್ವಿಂಟಾಲ್ ಭತ್ತವನ್ನು ತಿಂದು ತೇಗಿದ ಕಾಡಾನೆಗಳು: ರೈತರು ಕಂಗಾಲು

beluru
28/12/2024

ಹಾಸನ: ಬೇಲೂರು ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಕಾಡಾನೆಗಳು ಬರೋಬ್ಬರಿ 60 ಕ್ವಿಂಟಾಲ್ ಭತ್ತವನ್ನು ತಿಂದು ಹಾಕಿರುವ ಘಟನೆ ನಡೆದಿದೆ.

ಗ್ರಾಮದ ಮನು, ಹೂವೇಗೌಡ, ಹಾಲೇಗೌಡ, ಹಿರಿಗೌಡ, ಶರತ್ ಹಾಗೂ ರಮೇಶ್ ಸೇರಿದಂತೆ 8 ಜನ ರೈತರಿಗೆ ಸೇರಿದ ಭತ್ತ ಆನೆಗಳಿಗೆ ಆಹಾರವಾಗಿದೆ. ಭತ್ತ ಕಟಾವು ಮಾಡಿ ಟ್ರ್ಯಾಕ್ಟರ್ ಮೂಲಕ ಸಾಗಿಸಲು ಗೋಣಿಗಳಲ್ಲಿ ಭತ್ತ ತುಂಬಿಸಿಡಲಾಗಿತ್ತು. ತಡ ರಾತ್ರಿ ದಾಳಿ ಮಾಡಿದ ಕಾಡಾನೆಗಳು ಭತ್ತವನ್ನು ತಿಂದು ತೇಗಿವೆ.

ರೈತರಿಗೆ ಅಂದಾಜು 3 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಇನ್ನೇನು ಕೈಸೇರಬೇಕು ಅನ್ನೋವಷ್ಟರಲ್ಲಿ ಆನೆಗಳಿಗೆ ಆಹಾರವಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಬೆಳೆ ನಾಶದಿಂದ ಆದ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ರೈತರು, ಸ್ಥಳೀಯರು ಒತ್ತಾಯಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ