ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಗೆ ಘರ್ ವಾಪಸಿ ಆಗ್ತಾರಾ?: ಡಿ.ಕೆ.ಶಿವಕುಮಾರ್‌ ಆಪ್ತ ಶಾಸಕ ಶ್ರೀನಿವಾಸ್ ಹೇಳಿದ್ದೇನು? - Mahanayaka
12:04 PM Wednesday 27 - August 2025

ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಗೆ ಘರ್ ವಾಪಸಿ ಆಗ್ತಾರಾ?: ಡಿ.ಕೆ.ಶಿವಕುಮಾರ್‌ ಆಪ್ತ ಶಾಸಕ ಶ್ರೀನಿವಾಸ್ ಹೇಳಿದ್ದೇನು?

n shrinivas
18/08/2023


Provided by

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತ ನೆಲಮಂಗಲದ ಕಾಂಗ್ರೆಸ್ ಶಾಸಕ ಎನ್.ಶ್ರೀನಿವಾಸ್‌ ಗೆ‌‌ ಕೆಲ ಬಿಜೆಪಿಗರನ್ನು ಕಾಂಗ್ರೆಸ್‌ ಗೆ ಸೇರಿಸುವ ಜವಾಬ್ದಾರಿ‌ ನೀಡಿದ್ದಾರೆನ್ನಲಾಗುತ್ತಿದ್ದು, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್  ಅವರು ಕಾಂಗ್ರೆಸ್‍ ಗೆ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಬೆಂಬಲಿಗರು ಕಾಂಗ್ರೆಸಿಗೆ ಸೇರುತ್ತಾರೆ ಎಂದ ಮೇಲೆ‌ ಅವರೂ ಸೇರುತ್ತಾರೆ ಎಂದರ್ಥ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಗುರುವಾರ ಯಶವಂತಪುರ ಕ್ಷೇತ್ರದ ಹೇರೋಹಳ್ಳಿಯಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಶ್ರೀನಿವಾಸ್ ಕೂಡ ಭಾಗಿಯಾಗಿದ್ದರು.ಈ ವೇಳೆ   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ. ಬೆಂಬಲಿಗರೇ ಬರುತ್ತೇವೆ ಎಂದು ಹೇಳಿದ ಮೇಲೆ ಸೋಮಶೇಖರ್ ಬಿಜೆಪಿಯಲ್ಲಿರಲು ಸಾಧ್ಯವಿಲ್ಲ. ಸೋಮಶೇಖರ್ ಸಹ ಕಾಂಗ್ರೆಸ್‍ ಗೆ ಬರುವ ನಿರೀಕ್ಷೆ ಇದೆ. ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಕೊಳ್ಳುತ್ತಾರೆ ಎಂದರು.

ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಕಾರ್ಪೊರೇಟರ್ ಚಿಕ್ಕರಾಜು ಮಾತನಾಡಿ, ನಮಗೆ ಇಲ್ಲಿ ಉಳಿಗಾಲವಿಲ್ಲ. ಇಲ್ಲಿ ನಮ್ಮ ವಿರುದ್ಧ ಪಿತೂರಿ ನಡೆಯುತ್ತಿದೆ. ಕಾಂಗ್ರೆಸ್‍ಗೆ ವಾಪಸ್ ಹೋಗೋಣ ಎಂದು ಒತ್ತಾಯಿಸಿದ್ದೇವೆ. ನಿರ್ಧಾರ ಕೈಗೊಳ್ಳಲು ಸೋಮಶೇಖರ್ ಸಮಯ ಕೇಳಿದ್ದಾರೆ. ಬಿಜೆಪಿ ಪಕ್ಷದ ವರಿಷ್ಠರ ಜೊತೆ ಮಾತಾಡಿ ಸರಿಪಡಿಸುತ್ತೇನೆ ಎಂದಿದ್ದಾರೆ. 3–4 ದಿನದಲ್ಲಿ ಸೋಮಶೇಖರ್ ತೀರ್ಮಾನ ತಿಳಿಸದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ