ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿಗೆ ಸವಾಲ್ ಹಾಕಿದ ಕೇಜ್ರಿವಾಲ್ - Mahanayaka
10:14 PM Tuesday 9 - September 2025

ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಪ್ರಧಾನಿ ಮೋದಿಗೆ ಸವಾಲ್ ಹಾಕಿದ ಕೇಜ್ರಿವಾಲ್

06/10/2024

ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಆಡಳಿತದ ಎಲ್ಲಾ ರಾಜ್ಯಗಳಿಗೆ ಉಚಿತ ವಿದ್ಯುತ್ ನೀಡುವಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.


Provided by

‘ಜನತಾ ಕಿ ಅದಾಲತ್’ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕೇಸರಿ ಪಕ್ಷದ ‘ಡಬಲ್ ಎಂಜಿನ್’ ಸರ್ಕಾರವು ರಾಜ್ಯಗಳಾದ್ಯಂತ ವಿಫಲವಾಗಿದೆ ಎಂದು ಆರೋಪಿಸಿದರು. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ಎರಡರಲ್ಲೂ ಬಿಜೆಪಿ ಸೋಲು ಅನುಭವಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಅವರು “ಡಬಲ್ ಎಂಜಿನ್” ಮಾದರಿಯನ್ನು “ಡಬಲ್ ಲೂಟಿ ಮತ್ತು ಡಬಲ್ ಭ್ರಷ್ಟಾಚಾರ” ಎಂದು ಕರೆದರು.
“ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಮೊದಲು ಬಿಜೆಪಿ ಆಡಳಿತದ ಎಲ್ಲಾ 22 ರಾಜ್ಯಗಳಿಗೆ ಉಚಿತ ವಿದ್ಯುತ್ ಒದಗಿಸುವಂತೆ ನಾನು ಪ್ರಧಾನಿ ಮೋದಿಗೆ ಸವಾಲು ಹಾಕುತ್ತೇನೆ. ಅವರು ಹಾಗೆ ಮಾಡಿದರೆ, ನಾನು ಬಿಜೆಪಿ ಪರ ಪ್ರಚಾರ ಮಾಡುತ್ತೇನೆ” ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ