ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ - Mahanayaka
11:28 AM Thursday 15 - January 2026

ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ

bhim army
08/10/2021

ನವದೆಹಲಿ: ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ, ಪ್ರಧಾನಿ ಮೋದಿ  ಮನೆಗೆ ಮುತ್ತಿಗೆ ಹಾಕುವುದಾಗಿ ಭೀಮ್ ಆರ್ಮಿ, ಆಜಾದ್ ಸಮಾಜ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಎಚ್ಚರಿಕೆ ನೀಡಿದ್ದಾರೆ.

ಲಖೀಂಖೇರಿ ಘಟನೆ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಧಾನಿಯವರು ರೈತರ ಜತೆ ಮಾತುಕತೆ ನಡೆಸಬೇಕು. ಲಖಿಂಪುರ ಖೇರಿಗೆ ತೆರಳಿ ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿಯವರು ಪ್ರತಿಯೊಂದು ವಿಚಾರಕ್ಕೂ ಟ್ವೀಟ್ ಮಾಡುತ್ತಾರೆ. ಆದರೆ ರೈತರ ಹತ್ಯೆ ಬಗ್ಗೆ ಈವರೆಗೆ ಪ್ರತಿಕ್ರಿಯಿಸಿಲ್ಲ. ತಪ್ಪಿತಸ್ಥರು ಆರಾಮವಾಗಿದ್ದಾರೆ. ಏಳು ದಿನಗಳ ಒಳಗಾಗಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಪ್ರಧಾನಿ ಅವರ ಮನೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು

ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ

ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ!

ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಬಿಜೆಪಿ ನಾಯಕರು ಕಾರಿನಲ್ಲಿ ಬರುವ ವೇಳೆ ಎಚ್ಚರವಾಗಿರಿ | ಸಾರ್ವಜನಿಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

ಇತ್ತೀಚಿನ ಸುದ್ದಿ