ನನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ: ನಿತಿನ್ ಗಡ್ಕರಿ ಹೇಳಿಕೆ - Mahanayaka
1:09 AM Friday 11 - September 2026

ನನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ: ನಿತಿನ್ ಗಡ್ಕರಿ ಹೇಳಿಕೆ

27/09/2024

ಲೋಕಸಭಾ ಚುನಾವಣೆಗೆ ಮೊದಲು ಮತ್ತು ನಂತರ ಪ್ರಧಾನಿಯಾಗಲು ನನಗೆ ಅನೇಕ ಬಾರಿ ಆಫರ್ ಬಂದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇಂಡಿಯಾ ಟುಡೇ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಗಡ್ಕರಿ, ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳಲು ಸಿದ್ಧರಿದ್ದರೆ ವಿರೋಧ ಪಕ್ಷದ ನಾಯಕರೊಬ್ಬರು ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂಬ ತಮ್ಮ ಹಿಂದಿನ ಹೇಳಿಕೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಬಹುದೇ ಎಂದು ಕೇಳಿದಾಗ ಈ ಹೇಳಿಕೆ ನೀಡಿದರು.

ಲೋಕಸಭಾ ಚುನಾವಣೆಗೂ ಮುನ್ನ ಮತ್ತು ನಂತರವೂ ನನಗೆ ಇಂತಹ ಆಫರ್ ಬಂದಿದೆ ಎಂದು ಅವರು ಹೇಳಿದರು.ಜೂನ್ ನಲ್ಲಿ ಲೋಕಸಭಾ ಫಲಿತಾಂಶದ ನಂತರ ಗಡ್ಕರಿ ಅವರಿಗೆ ಪ್ರಧಾನಿಯಾಗುವ ಪ್ರಸ್ತಾಪಗಳು ಬಂದಿವೆಯೇ ಎಂದು ಸಂದರ್ಶಕರು ಕೇಳಿದಾಗ ಹಿರಿಯ ಬಿಜೆಪಿ ನಾಯಕ ಈ ಪ್ರಶ್ನೆಯಿಂದ ತಪ್ಪಿಸಿಕೊಂಡರು. ಅಲ್ಲದೇ “ನಾನು ನನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ಈ ಪ್ರಸ್ತಾಪವನ್ನು ಸ್ವೀಕರಿಸುವ ಪ್ರಶ್ನೆಯೇ ಇರಲಿಲ್ಲ.

ಪ್ರಧಾನಿಯಾಗುವುದು ನನ್ನ ಗುರಿಯಲ್ಲ. ನಾನು ನನ್ನ ಸಿದ್ಧಾಂತದೊಂದಿಗೆ ನನ್ನ ಸಿದ್ಧಾಂತದೊಂದಿಗೆ ಬದುಕುತ್ತಿದ್ದೇನೆ” ಎಂದು ಅವರು ಪ್ರತಿಪಾದಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler