1:41 AM Wednesday 22 - October 2025

ಮುಂಬೈನಲ್ಲಿ ದರೋಡೆ ಯತ್ನ: ವಿರೋಧಿಸಿದ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಕ್ಕೆ ತಳ್ಳಿದ ಕ್ರೂರಿಗಳು

08/08/2023

ಮುಂಬೈನ ಜನನಿಬಿಡ ದಾದರ್ ರೈಲ್ವೆ ನಿಲ್ದಾಣದಲ್ಲಿ ರೈಲಿನಲ್ಲಿ ದರೋಡೆ ಮಾಡಲು ಪ್ರಯತ್ನಿಸಿದ ಮಹಿಳೆಯನ್ನು ವ್ಯಕ್ತಿಯೊಬ್ಬ ಚಲಿಸುವ ರೈಲಿನಿಂದ ಹೊರಗೆ ತಳ್ಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು-ಮುಂಬೈ ಸಿಎಸ್ಎಂಟಿ ಉದ್ಯಾನ್ ಎಕ್ಸ್ ಪ್ರೆಸ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾತ್ರಿ 8.30 ರ ಸುಮಾರಿಗೆ ರೈಲು ತನ್ನ ಎರಡನೇ ಕೊನೆಯ ನಿಲ್ದಾಣವಾದ ದಾದರ್ ನಿಂದ ಹೊರಬರುತ್ತಿದ್ದಾಗ ಓರ್ವ ವ್ಯಕ್ತಿ ಕಾಯ್ದಿರಿಸದ ಮಹಿಳಾ ಬೋಗಿಗೆ ಪ್ರವೇಶಿಸಿದ್ದಾನೆ. ಅದರಲ್ಲಿ ಕಡಿಮೆ ಪ್ರಯಾಣಿಕರಿದ್ದರು. ಆತ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಅಲ್ಲದೇ ನಗದು ಹೊಂದಿರುವ ಬ್ಯಾಗನ್ನು ಕಸಿದುಕೊಂಡಿದ್ದಾನೆ.

ಸಂತ್ರಸ್ತೆ ದರೋಡೆ ಪ್ರಯತ್ನವನ್ನು ವಿರೋಧಿಸಿದಾಗ, ಆರೋಪಿಗಳು ಅವಳನ್ನು ಕಂಪಾರ್ಟ್ ಮೆಂಟ್ ನಿಂದ ಹೊರಗೆ ತಳ್ಳಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತೆಯ ಸ್ಥಿತಿಯ ಬಗ್ಗೆ ವಿವರಗಳು ಲಭ್ಯವಿಲ್ಲ.

ಸಂತ್ರಸ್ತೆ ತಮ್ಮನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ತಿಳಿಸಿದೆ. ಎಫ್ಐಆರ್ ದಾಖಲಿಸುವ ಮೊದಲೇ ಆರೋಪಿಯನ್ನು ಬಂಧಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version