‘ಯಮರಾಜ ಕಾಯುತ್ತಿದ್ದಾನೆ’: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಸಿಎಂ ಖಡಕ್ ಎಚ್ಚರಿಕೆ

ಲಕ್ನೋದ ಅಂಬೇಡ್ಕರ್ ನಗರದಲ್ಲಿ ಬಾಲಕಿಗೆ ಇಬ್ಬರು ಪುರುಷರಿಂದ ಕಿರುಕ್ಕೊಳಕ್ಕಾಗಿ ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದಲ್ಲಿ ಯಾರಾದರೂ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಮಾಡಿದರೆ, ‘ಯಮರಾಜ’ (ಸಾವಿನ ದೇವರು) ನಿಮಗಾಗಿ ಕಾಯುತ್ತಾನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಬಲವಾದ ಕಾನೂನು ವ್ಯವಸ್ಥೆಯ ಮಹತ್ವವನ್ನು ಯೋಗಿ ಎತ್ತಿ ತೋರಿಸಿದರು. ವ್ಯವಸ್ಥೆಯನ್ನು ಅಡ್ಡಿಪಡಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.
ಗೋರಖ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು. ಈ ಆಘಾತಕಾರಿ ಘಟನೆ ಶನಿವಾರ ನಡೆದಿದ್ದು, ಮೂವರು ಆರೋಪಿಗಳನ್ನು ಗಂಟೆಗಳ ನಂತರ ಬಂಧಿಸಲಾಗಿದೆ. ಭಾನುವಾರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಇಬ್ಬರು ಆರೋಪಿಗಳಿಗೆ ಗುಂಡು ತಗುಲಿದ್ದು, ಒಬ್ಬನ ಕಾಲು ಮುರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಿದ ರೀತಿಯನ್ನು ತನ್ನ ಸಾಧನೆಗಳಲ್ಲಿ ಒಂದಾಗಿದೆ ಎಂದು ಹೇಳಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, 11 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತೆ ಮತ್ತು ಇನ್ನೊಬ್ಬ ಹುಡುಗಿ ತಮ್ಮ ಬೈಸಿಕಲ್ ಗಳಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬೈಕ್ ಅವಳನ್ನು ಸಮೀಪಿಸಿದಾಗ ಹಿಂಬದಿ ಸವಾರ ಅವಳ ದುಪ್ಪಟ್ಟವನ್ನು ಎಳೆಯುತ್ತಾನೆ.
ಈ ಕುರಿತು ಅಂಬೇಡ್ಕರ್ ನಗರದ ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿನ್ಹಾ ಮಾತನಾಡಿ, “ಮೂವರು ಆರೋಪಿಗಳು ವಾಹನದಿಂದ ಜಿಗಿದು, ಪೊಲೀಸ್ ರೈಫಲ್ ಕಸಿದುಕೊಂಡು ನಮ್ಮ ತಂಡದ ಮೇಲೆ ಗುಂಡು ಹಾರಿಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಅವರಲ್ಲಿ ಇಬ್ಬರ ಕಾಲಿಗೆ ಗುಂಡು ತಗುಲಿದ್ದರೆ, ಮೂರನೆಯವನಿಗೆ ಕಾಲು ಮುರಿತವಾಗಿದೆ. ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಅಂದರು.
ಆರೋಪಿಗಳನ್ನು ಶಹವಾಜ್ ಮತ್ತು ಅವರ ಸಹೋದರ ಅರ್ಬಾಜ್ ಎಂದು ಗುರುತಿಸಲಾಗಿದ್ದು, ಈವರು ದುಪ್ಪಟ್ಟಾ ಎಳೆದಿದ್ದಾರೆ. ಮೂರನೇ ಆರೋಪಿ ಫೈಸಲ್ ಬಾಲಕಿಯ ಮೇಲೆ ಓಡೆದಿವ. ಆರೋಪಿತ ಸಹೋದರರು ಮತ್ತು ಫೈಸಲ್ ನಡುವೆ ಏನಾದರೂ ಸಂಬಂಧವಿದೆಯೇ ಎಂದು ಇನ್ನೂ ಕಂಡುಹಿಡಿಯಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ ಮಹಿಳೆಯ ಗೌರವಕ್ಕೆ ಧಕ್ಕೆ ತರಲು ಕೊಲೆ ಮತ್ತು ಹಲ್ಲೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ