ಬಿಗ್ ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪ ಸಿಎಂ ಕುರ್ಚಿಗೆ ಕಂಟಕ!
ಬೆಂಗಳೂರು: ರಾಜ್ಯದಲ್ಲಿ ಯಡಿಯೂರಪ್ಪ ಅವರ ಕುರ್ಚಿಯನ್ನು ಅಲುಗಾಡಿಸಲು ಈ ಹಿಂದಿನಿಂದಲೇ ಸ್ವ ಪಕ್ಷದವರಿಂದಲೇ ಪ್ರಯತ್ನ ನಡೆಯುತ್ತಿದೆ ಎನ್ನುವ ಅನುಮಾನಗಳು ಸೃಷ್ಟಿಯಾಗಿತ್ತು. ಆದರೆ ಇದೀಗ ಯಡಿಯೂರಪ್ಪನವರನ್ನು ಕೆಳಗಿಳಿಸಲು ಬಿಜೆಪಿಯಲ್ಲಿ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎನ್ನುವುದು ಸ್ಪಷ್ಟವಾಗಿದೆ.
ಬೆಂಗಳೂರಿನಲ್ಲಿಂದು ಈ ಬಗ್ಗೆ ಮಾತನಾಡಿರುವ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ವಿಚಾರವಾಗಿ ಸಸಚಿವರು ಹಾಗೂ ಕೆಲವು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಅನೇಕ ಸಚಿವರು, ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಹಿಂದಿನಿಂದಲೂ ನಾಯಕತ್ವ ಬದಲಾವಣೆಯ ಬಗ್ಗೆ ಪ್ರಶ್ನಿಸಿದ ವೇಳೆ ಆರ್.ಅಶೋಕ್, ಇದು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದರು. ಆದರೆ ಈ ಬಾರಿ, ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಶೇ.100ರಷ್ಟು ಬದಲಾವಣೆ ಚಟುವಟಿಕೆಗಳು ನಡೆಯುತ್ತಿರುವುದು ನಿಜ ಎಂದು ಅವರು ಹೇಳಿದ್ದಾರೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಯಡಿಯೂರಪ್ಪನವರನ್ನು ಕುರ್ಚಿಯಿಂದ ಇಳಿಸಲು ಸಕಲ ಪ್ರಯತ್ನಗಳಾಗುತ್ತಿದ್ದು, ದೆಹಲಿಗೆ ಹೋಗಿರುವ ಸಚಿವ, ಶಾಸಕರು ಹೈಕಮಾಂಡ್ ತಲೆಗೆ ಈ ಸಂಬಂಧ ಇರುವೆ ಬಿಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿದ್ಯಮಾನಗಳನ್ನು ಗಮನಿಸಿದರೆ, ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿರುವ ಮಾತುಗಳು ನಿಜವಾಗುವ ಸಾಧ್ಯತೆಗಳು ಕಂಡು ಬಂದಿದೆ.




























