ತೋಟದಿಂದ ಏಣಿ ತರುವ ವೇಳೆ ವಿದ್ಯುತ್ ಶಾಕ್: ಯುವಕ ಸಾವು - Mahanayaka

ತೋಟದಿಂದ ಏಣಿ ತರುವ ವೇಳೆ ವಿದ್ಯುತ್ ಶಾಕ್: ಯುವಕ ಸಾವು

sampath
11/03/2025

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ತೊಪ್ಪುರು ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದ್ದು, ತೋಟದಲ್ಲಿ ಅಲ್ಯೂಮಿನಿಯಂ ಏಣಿ ಕರೆತರುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿದ್ದಾನೆ.


Provided by

ಸಂಪತ್ (28) ಮೃತಪಟ್ಟ ಯುವಕನಾಗಿದ್ದಾನೆ. ತೋಟದ ಕೆಲಸದ ವೇಳೆ ಅಲ್ಯೂಮಿನಿಯಂ ಏಣಿಯನ್ನು ತೆಗೆದು ತರುತ್ತಿದ್ದ ಸಂಪತ್, ಆ ಏಣಿ ಅಚಾನಕ್ ವಿದ್ಯುತ್ ತಂತಿಗೆ ತಗುಲಿ ತೀವ್ರ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೂರು ವರ್ಷಗಳ ಹಿಂದಷ್ಟೆ ಮದುವೆಯಾಗಿದ್ದ ಸಂಪತ್ ಅವರಿಗೆ ಚಿಕ್ಕ ಮಗು ಕೂಡ ಇದೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ದುರಂತ ಘಟನೆ ತೊಪ್ಪುರು ಗ್ರಾಮದಲ್ಲಿ ಆಘಾತ ಮೂಡಿಸಿದ್ದು, ಮೃತನ ಕುಟುಂಬ ಆಕ್ರಂದನ ಮುಗಿಲು ಮುಟ್ಟಿದೆ.


Provided by

ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

ಇತ್ತೀಚಿನ ಸುದ್ದಿ