ಕಾರು ಅಪಘಾತ ಪ್ರಕರಣ: ಯೂಟ್ಯೂಬರ್ ನ ಕಾರು ವಶಕ್ಕೆ

31/03/2025

ನೋಯ್ಡಾದಲ್ಲಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ
ಇಬ್ಬರು ಗಾಯಗೊಂಡ ಲ್ಯಾಂಬೊರ್ಗಿನಿ ಕಾರು ಜನಪ್ರಿಯ ಯೂಟ್ಯೂಬರ್ ಮೃದುಲ್ ತಿವಾರಿ ಅವರದ್ದು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ತನಿಖೆ ನಡೆಸುತ್ತಿರುವ ಪೊಲೀಸರು ಮೃದುಲ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ನೋಯ್ಡಾದ ಸೆಕ್ಟರ್ 94 ರಲ್ಲಿ ಇಬ್ಬರು ವ್ಯಕ್ತಿಗಳಿಗೆ ಡಿಕ್ಕಿ ಹೊಡೆದ ನಂತರ ಚಾಲಕ ದೀಪಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ತನಿಖೆಯ ಸಮಯದಲ್ಲಿ, ದೀಪಕ್ ತಾನು ಕಾರನ್ನು ಟೆಸ್ಟ್ ಡ್ರೈವ್ ಗಾಗಿ ತೆಗೆದುಕೊಳ್ಳುತ್ತಿದ್ದೆ ಮತ್ತು ಅದು ತನಗೆ ಸೇರಿದ್ದಲ್ಲ ಎಂದು ಒಪ್ಪಿಕೊಂಡಿದ್ದಾನೆ.

ಆರೋಪಿ ದೀಪಕ್ ಜೈಪುರ ಮೂಲದವನಾಗಿದ್ದು, ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಕಾರ್ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾನೆ. ಅವರು ಐಷಾರಾಮಿ ಕಾರನ್ನು ಟೆಸ್ಟ್ ಡ್ರೈವ್ ಗಾಗಿ ತೆಗೆದುಕೊಂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version